ನಿನ್ನ ಮುಂಗುರುಳ ತಿರುವು ಅಪಘಾತ ವಲಯ..!!
ಕಣ್ಸೆಳೆತದಲ್ಲೆನ್ನೆದೆಗಡಲಲೆಗಳೇರಿಳಿತಗಳನೇರುಪೇರುಗೊಳಿಸಿದವಳೇ.. ಲಯ ತಪ್ಪಿದ ಹೃದಯ ಬಡಿತದ ಸಮ್ಮುಖದಲ್ಲೇ ನಿನಗಾಗಿ (ಕೊನೆಯದಾಗಿ?) ಈ ಪತ್ರ ಬರೆಯುತ್ತಿದ್ದೇನೆ.. ಒಪ್ಪಿಸಿಕೋ.. ಸಂವತ್ಸರವೊಂದು ಕಳಚಿ ಬಿದ್ದು ಹೊಸದಕ್ಕೆ ದಾರಿ ಮಾಡಿಕೊಟ್ಟಿದೆ ಅಂತೆಯೇ ಸಂಬಂಧವೂ ಕೂಡ.. ಆದರಿಲ್ಲಿ ಹೊಸದರ ನೆರಳು ಇಣುಕುವ ಸಾಧ್ಯತೆ ಕಡಿಮೆ ಇದೆ ಅದಕ್ಕಾಗಿ ಸದ್ಯದ ಪರಿಸ್ಥಿಯ ಮಟ್ಟಿಗೆ ಇದು ಯುಗಾಂತ್ಯ. ಇಷ್ಟು ವರ್ಷಗಳವರೆಗೆ ಕಣ್ಣಲ್ಲಿ ಕಾಪಿಟ್ಟುಕೊಂಡು ಬಂದಿದ್ದ ನಿನ್ನ ಬಿಂಬ ಕದಡಿ ಹೋಗಿದೆ, ಎದ್ದಿರುವ ಅಲೆಗಳು ಮೌನವಾಗುವ ಸಂಭವವಂತೂ ಕಾಣುತ್ತಿಲ್ಲ, ಬೊಗಸೆಯಲ್ಲಿ ನಿನ್ನ ಬಿಂಬವ ಬಂಧಿಸಿ ಉಳಿಸಿಕೊಳ್ಳೋಣವೆಂದರೆ ನಡುಗುವ ಕೈಗಳು ಅದಕ್ಕೆ ಸಹಕರಿಸುತ್ತಿಲ್ಲ, ಅಸಹಾಯಕ ಅಮಾಯಕ ನಿರ್ದೋಷಿ ನಿರಪರಾಧಿಗೆ ನೀ ಕೊಟ್ಟ ಜೀವಾವಧಿ ಶಿಕ್ಷೆಯನ್ನು ವಜಾಗೊಳಿಸುವ ಮುನ್ಸೂಚನೆಯಂತೂ ಯಾವ ದಿಕ್ಕಿನಲ್ಲೂ ತೋರುತ್ತಿಲ್ಲ, ಕನಸುಗಳನ್ನೆಲ್ಲ ಕಳೆದುಕೊಂಡು ಬದುಕಿನ ನಡುಬೀದಿಯಲಿ ದಿವಾಳಿಯಾಗಿ ಕುಳಿತಿರುವೆ.. ಮುಂದೇನು? ಅದ್ಯಾಕೆ ಅಷ್ಟೊಂದು ಕಟುವಾಗಿ ಹೋದೆ? ಚಿಕ್ಕ ಪುಟ್ಟ ವಿಷಯಗಳಿಗೂ ತಲೆ ಕೆಡಿಸಿಕೊಳ್ಳುತ್ತಿದ್ದವಳು, ನಾ ಪರಿಪರಿಯಾಗಿ ಬೇಡಿಕೊಂಡರೂ ನಿರ್ಲಕ್ಷಿಸಿ ಬಿಟ್ಟೆಯಲ್ಲಾ? ಹೊರಟು ಹೋಗು ಅಂತ ಒಲ್ಲದ ಮನಸ್ಸಿನಿಂದಲೇ ಹೇಳಿ ಕಳಿಸಿಬಿಟ್ಟೆಯಲ್ಲಾ? ನಿನ್ನಿಷ್ಟವನ್ನೆಲ್ಲಾ ಒತ್ತೆಯಿಟ್ಟು ಏನನ್ನ ಸಾಧಿಸೋಕೆ ಹೊರಟಿದ್ದಿ? ನನ್ನ ನಿಷ್ಕಲ್ಮಶ ಭಾವವೀಗ ಜೀವವಿಲ್ಲ