Posts

Showing posts from 2018

ಮಲೆನಾಡಿನ ಬಗೆಬಗೆಯ ಉಪ್ಪಿನಕಾಯಿ

Image
ಬಾಳೆಲೆಯ ತುದಿಗೂ, ಬಾಟಲಿಯ ಪಕ್ಕಕ್ಕೂ, ಕಾಲಕಾಲಕ್ಕೂ ಸಲ್ಲುವ ಸರ್ವಶ್ರೇಷ್ಠ ಪದಾರ್ಥ ಉಪ್ಪಿನಕಾಯಿ. ಉಪ್ಪಿನಕಾಯಿ, ಬೆರಳು ಮತ್ತು ನಾಲಗೆಯ ನಡುವಿನ ತ್ರಿಕೋನ ಪ್ರೇಮಕಥೆ ಇಂದು ನಿನ್ನೆಯದಲ್ಲ. ದಿನನಿತ್ಯದ ಸಾಮಾನ್ಯ ಊಟದಿಂದ ಹಿಡಿದು ಭೂರಿ ಭೋಜನದ ನಡುವಲ್ಲೂ ಜಾಗಗಿಟ್ಟಿಸಿಕೊಂಡು ತನ್ನತನವನ್ನು ಕಾಯ್ದುಕೊಂಡಿರುವ ಈ ಉಪ್ಪಿನಕಾಯಿಯಲ್ಲೂ ತರಹೇವಾರಿ ವಿಧಗಳಿವೆ, ಅದರಲ್ಲೂ ಮಲೆನಾಡಿನ ಜನ ಉಪ್ಪಿನಕಾಯಿ ತಯಾರಿಕೆಯಲ್ಲಿ ಸಿದ್ದಹಸ್ತರು. ಬಿರುಬೇಸಿಗೆಯ ಹೊತ್ತಲ್ಲೂ ನಿಮ್ಮ ನಾಲಗೆಯ ಮತ್ತೇರಿಸುವ ಜಿಹ್ವಾಪ್ರಿಯ ಪದಾರ್ಥದ ಕುರಿತು ಒಂದು ಕಿರುಲೇಖನ. 1. ಮಾವಿನಮಿಡಿ ಉಪ್ಪಿನಕಾಯಿ - ಹಣ್ಣುಗಳ ರಾಜ ಎಂದೇ ಪ್ರಸಿದ್ದವಾದ ಮಾವು, ಉಪ್ಪಿನಕಾಯಿ ವಿಚಾರದಲ್ಲೂ ತನ್ನ ಪಾರುಪತ್ಯವನ್ನು ಬಿಟ್ಟುಕೊಟ್ಟಿಲ್ಲ. ಹದವಾಗಿ ಬೆಳೆದ ಘಮಘಮಿಸೋ ಮಾವಿನಮಿಡಿಗಳನ್ನು ಕೊಯ್ದು ಉಪ್ಪಿನಕಾಯಿ ಹಾಕುವುದೆಂದರೆ ಅಕ್ಷರಶಃ ಹಬ್ಬ. ಇದರ ವಿಶೇಷತೆಯೆಂದರೆ ಕೆಲವು ಬಗೆಯ ಮಾವಿನಮಿಡಿಗಳು ಮಾತ್ರ ಉಪ್ಪಿನಕಾಯಿಗೆ ಸೂಕ್ತ. ಆ ಕೆಲವೇ ಕೆಲವು ಬಗೆಗಳಲ್ಲಿ ಅಪ್ಪೆಮಿಡಿ ಬಹುಶ್ರೇಷ್ಠ. ತಯಾರಿಸುವ ವಿಧಾನ : ಹದವಾಗಿ ಬೆಳೆದ ಮಾವಿನಮಿಡಿಗಳನ್ನು ಕೊಯ್ದು, ಸ್ವಚ್ಛಗೊಳಿಸಿ, ಚೆನ್ನಾಗಿ ಒರೆಸಿ ದೊಡ್ಡ ಪಾತ್ರೆಯ (ಡ್ರಮ್) ತಳಭಾಗಕ್ಕೆ ಮಾವಿನಸೊಪ್ಪನ್ನು ಹಾಕಿ ನಂತರ ಒಂದು ಪದರ ಮಾವಿನಮಿಡಿ ಹಾಗೂ ಒಂದು ಪದರ ಉಪ್ಪಿನಂತೆ ತುಂಬಿಸಿಟ್ಟು ಮುಚ್ಚಳ ಹಾಕದೆ ಗಾಳಿಯಾಡಲು ಅನುವಾಗುವಂತೆ ಮುಚ್ಚಬೇಕು.

ಹುಲಿಮಾರ

Image
             "ದ್ಯಾವನಾಯ್ಕನ್ನ ಹುಲೀ ಹಿಡೀತಂತೆ, ನಿನ್ನೆ ರಾತ್ರಿ ಶಿಕಾರಿಗ್ ಹೋದೋನು ಬೆಳ್ಗಾದ್ರೂ ಬರ್ದೇ ಇರೋದನ್ ನೋಡಿ ಅವ್ನ್ ಮಗ ಮಾರ ಹುಡ್ಕಂಡ್ ಹೋದಾಗ ಆ ಹುಲಿಯಮ್ಮನ್ ದೇವಸ್ಥಾನದ್ ಎದ್ರಿರೋ ಹೆಬ್ಬಲಸಿನ ಮರದ್ ಕೆಳ್ಗೆ ಬಿದ್ದಿದ್ನಂತೆ, ಮಗ ಹುಟ್ಟಿದಾಗ ಹರಕೆ ತೀರ್ಸೋಕ್ ಹೋದೋನು, ಆಮೇಲ್ ಒಂದ್ ಕೋಳಿ ಬಲಿ ಕೂಡ ಕೊಟ್ಟಿಲ್ಲ, ದೇವ್ರ್ ಸುಮ್ನೆ ಬಿಡ್ತದಾ? ಅವ್ನನ್ನೇ ಬಲಿ ತಗಂಡಿದೆ ನೋಡಿ" ಏದುಸಿರು ಬಿಡುತ್ತಾ ಯಜಮಾನ ಸೀನಯ್ಯಂಗೆ ವರದಿ ಒಪ್ಪಿಸುತ್ತಿದ್ದ ಶಂಕ್ರ. ದ್ಯಾವನಾಯ್ಕ ಸೀನಯ್ಯನ ಮನೆಮಗನಂತೆ ಇದ್ದವನು, ಸುಮಾರು ಐವತ್ತರ ಆಸುಪಾಸಿನವನು. ಸಣ್ಣ ಹುಡುಗನಿರಬೇಕಾದರೆ ಮಂಗನ ಕಾಯಿಲೆ ಬಂದು ಅವನ ಅಪ್ಪ, ಅಮ್ಮ ಸತ್ತ ಲಾಗಾಯ್ತು ಇವನನ್ನು ಸಾಕಿ, ಬೆಳೆಸಿ, ಮದುವೆ ಮಾಡಿಸುವ ತನಕವೂ ಮನೆಯಲ್ಲೇ ಇಟ್ಟುಕೊಂಡಿದ್ದರು ಸೀನಯ್ಯ. ಅವನದ್ದೂ ಒಂದು ಸಂಸಾರವೆಂದು ಶುರುವಾದ ಮೇಲೆ ತಮ್ಮ ಮನೆ ಬಳಿಯೇ ಒಂದು ಜಾಗ ಗೊತ್ತು ಮಾಡಿ ಚಿಕ್ಕ ಸೂರನ್ನೂ ಕಟ್ಟಿಕೊಟ್ಟಿದ್ದರು. ಹೀಗೆ ಮನೆ ಮಗನಂತೆ ಬೆಳೆದ ದ್ಯಾವನಾಯ್ಕ ಸತ್ತನೆಂದಾಗ ಸೀನಯ್ಯನಿಗೆ ಕಣ್ಣು ಕತ್ತಲೆಗಟ್ಟಿದಂತಾಗಿತ್ತು. ಅಮ್ಮೋರೇ.. ಸೀನಯ್ಯಂಗ್ ತಲೆ ಸುತ್ ಬಂದಿದೆ ನೀರ್ ತಗಂಬನ್ನಿ ಬೇಗ ಎಂದು ಶಂಕ್ರ ಕೂಗಿದ ತಕ್ಷಣ ಒಳಗಿನಿಂದ ಓಡಿಬಂದ ಮೂಕಮ್ಮ ಗಂಡನಿಗೆ ನೀರು ಕುಡಿಸಿ, ಎದೆಯುಜ್ಜುತ್ತಾ ಶಿವ್ನೇ ಏನಾಯ್ತಪ್ಪಾ ಎಂದು ಗಲಿಬಿಲಿಗೊಳ್ಳಲು, ಶಂಕ್ರ ಸಾವಧಾನವಾಗಿ ನಡೆದಿದ್ದನ್ನೆಲ್ಲಾ ವಿವರ

ಇವನ ಪ್ರತಾಪಕ್ಕೆ ನಾನು ಹರಕೆ ಕುರಿ

Image
ಬದುಕು ಕಟ್ಟುವ ಕೆಲಸ ಆರಂಭ ಆಗೋದೇ ಪಿಯುಸಿ ಮುಗಿದ ಮೇಲೆ, ಅಲ್ಲಿಯ ತನಕ ನಮ್ಮ ಗುರಿಯ ಬಗ್ಗೆ ಅರಿವಿದ್ದರೂ, ಸಾಗುವ ದಾರಿಯ ಕುರಿತು ಸ್ಪಷ್ಟತೆ ಇರುವುದಿಲ್ಲ. ಆ ಸಮಯದಲ್ಲಿ ನಮ್ಮ ತೊಳಲಾಟಗಳನ್ನ ಆಲಿಸೋಕೆ ಒಂದೊಳ್ಳೇ ಸ್ನೇಹಮಯಿ ಜೀವದ ಅವಶ್ಯಕತೆ ಖಂಡಿತಾ ಇರುತ್ತದೆ. ಅಂತೆಯೇ ನನಗಿರುವ ಕೆಲವೇ ಕೆಲವು ಬೆರಳೆಣಿಕೆಯಷ್ಟು ಬೆಸ್ಟ್ ಫ್ರೆಂಡ್ಸ್ ಎಂಬುವವರಲ್ಲಿ ಇವನೂ ಒಬ್ಬ, ಹೆಸರು ಶಿವಪ್ರಸಾದ. ನನ್ನೆಲ್ಲಾ ಯಡವಟ್ಟುಗಳಿಗೂ ಸಾಕ್ಷ್ಯ ಹೊಂದಿದವ. ನಮ್ಮ ನಡುವೆ ಅರಿಷಡ್ವರ್ಗಗಳಿಂದ ಹಿಡಿದು ಅಂತರಾಷ್ಟ್ರೀಯ ಮಟ್ಟದ ತನಕವೂ ಚರ್ಚೆಗಳಾಗುತ್ತವೆ, ವಯಸ್ಸು ಒಂದೇ ಆಗಿದ್ದರಿಂದ ಹದಿಹರೆಯದ ರಾಮಾಯಣಗಳ ಕುರಿತು ತುಸು ಜಾಸ್ತಿಯೇ ಮಾತನಾಡುತ್ತೇವೆ. ಬೆಳಿಗ್ಗೆ ಸೂರ್ಯ ಏಳುವುದಕ್ಕೆ ಮೊದಲೇ ನನ್ನನ್ನೆಬ್ಬಿಸಿ ನಿದ್ದೆಗಣ್ಣಿನಲ್ಲೇ ಮೊಂಬತ್ತಿಯ ಮುಂದೆ ಕೂರಿಸಿ ಅವನದೇ ಕಲ್ಪನೆಯನ್ನಿಟ್ಟುಕೊಂಡು ಫೋಟೋ‌ ತೆಗೆಯುವ ಇವನ ಹುಚ್ಚಿಗೆ ನಾನು ಹರಕೆಯ ಕುರಿ. ಇವನು ಪ್ರೇಮಪತ್ರ ಬರೆದಾಗ ಅವರಮ್ಮ ಅನುಮಾನಿಸಿದ್ದರಂತೆ, ಆ ಅನುಮಾನ ನಿವಾರಿಸೋಕೆ ನನ್ನ ಅಷ್ಟೂ ಪ್ರೇಮಪತ್ರಗಳನ್ನ ಅವರ ಮುಂದಿಟ್ಟು ತನ್ನನ್ನು ತಾನು ಬಚಾವ್ ಮಾಡಿಕೊಂಡ ಕಿಡಿಗೇಡಿ. ಅತೀ ಮುಗ್ಧನಂತೆ ತನ್ನನ್ನು ತಾನು ಬಿಂಬಿಸಿಕೊಳ್ಳೋ ಇವನೊಳಗಿರುವ ಮಹಾನ್ ಕಿಲಾಡಿಯ ಪರಿಚಯ ನನಗಿರುವುದರಿಂದ ಹೆಚ್ಚಿಗೆ ಹೊಗಳಿ ಆತ್ಮಸಾಕ್ಷಿಗೆ ಮೋಸ ಮಾಡಿಕೊಳ್ಳೋಕೆ ತಯಾರಿಲ್ಲ. ಆದರೆ ಒಂದಂತೂ ಸತ್ಯ ನನಗರಿವಿಲ್ಲದಂತೇ ನನ್ನಲ್ಲಿ ಕೆಲ

ದಾರಿ ಯಾವುದಯ್ಯಾ.. ಲೈಫಿನ ದಾರಿ ಯಾವುದಯ್ಯಾ??

Image
                               ಸುವರ್ಣ ನ್ಯೂಸ್ ಚಾನೆಲ್ಲಲ್ಲಿ ಪ್ರೈಮ್ ಟೈಮ್ ಡಿಬೇಟ್ ನಡೆಸಿಕೊಡ್ಬೇಕು.. ನಮಸ್ಕಾರ ನೀವು ನೋಡ್ತಾ ಇದೀರಾ ಸುವರ್ಣ ನ್ಯೂಸ್ ನಾನು ಸ್ಕಂದ ಆಗುಂಬೆ ಅಂತ ಮಾತು ಶುರು ಮಾಡ್ಲಾ..? ಅಯ್ಯೋ ತುಂಬಾ ಹಳೇ ಸ್ಟೈಲ್ ಆಗೋಗಿರುತ್ತೆ ಅಷ್ಟ್ರಲ್ಲಿ.. ಸೋ‌ ಬೇರೆ ಥರ ಏನಾರ್ ಹುಡ್ಕ್ಬೇಕು. ಊಹ್ಞೂಂ ಬೇಡ.. ಆ ವಿಜಯಲಕ್ಷ್ಮಿ ಶಿಬರೂರು ಮೇಡಂಗೆ ಏನ್ ಧೈರ್ಯ ನೋಡು, ಅವ್ರ್ ಥರಾನೇ ಇನ್ವೆಸ್ಟಿಗೇಟಿವ್ ಜರ್ನಲಿಸಂ ಮಾಡ್ಬೇಕು. ಅದೂ ಬೇಡ ಪೇಪರ್ರೇ ಬೆಟರ್ರು ಸ್ವಲ್ಪ ಆದ್ರೂ ಎಥಿಕ್ಸ್ ಉಳ್ಕೊಂಡಿದೆ ಇಲ್ಲೇ ಇದ್ದು ಒಳ್ಳೇ ಹೆಸ್ರು ಮಾಡಣ. ಏಯ್ ರೆಡಿಯೋ ಟ್ರೈ ಮಾಡ್ಬೋದು.‌. ಆರ್ ಜೆ ಆದ್ರೆ ಹೆಂಗೆ..? ಅಥ್ವಾ ಎಂಟ್ರಟೈನ್ಮೆಂಟ್ ಚಾನೆಲ್ ಸೇರ್ಕೊಂಡ್ಬಿಡ್ಲಾ? ಧಾರಾವಾಹಿಗೆ ಸಂಭಾಷಣೆ ಬರ್ದ್ರೆ ಒಳ್ಳೇ ದುಡ್ ಬರುತ್ತಂತೆ ಅದ್ ಕೂಡ ಮಾಡ್ಬೇಕು..‌ ಜಯಂತ್ ಕಾಯ್ಕಿಣಿ ಥರ ಪದ್ಯ ಬರ್ಯೋದ್ ಕಲೀಬೇಕು.. ಒಳ್ಳೇ ಲೈಫು ಅಂದ್ರೆ ಈ ಲೆಕ್ಚರರ್ಸ್ಗಳದ್ದು ಒಳ್ಳೇ ಸ್ಯಾಲ್ರಿನೂ ಇರುತ್ತೆ, ಟೈಮೂ ಇರುತ್ತೆ.. ಅತ್ತೆ ಮಾವನತ್ರ ಹೋಗಿ ಹೆಣ್ ಕೇಳೋಕೆ ಒಂದ್ ಧೈರ್ಯನೂ ಇರತ್ತೆ.. ಉಸ್ತಾದ್ ಹೊಟೇಲ್ ಫಿಲಂ ನೋಡಿ ಮೆಡುಲಾ ಅಬ್ಲಾಂಗೇಟಾದಲ್ಲಿ ವೇರಿಯೇಷನ್ ಆಗಿದೆ ಒಂದ್ ಹೋಟ್ಲು ಇಟ್ ಬಿಡ್ಲಾ..? ಹೇಗೂ ಆಗುಂಬೆ ಪಕ್ದಲ್ಲೇ ಊರಿದೆ ಒಂದ್ ಹೋಂ ಸ್ಟೇ ಮಾಡಿದ್ರೆ ಹೆಂಗೆ..? ಒಂದ್ ಸ್ಕೂಲ್ ಮಾಡ್ಬೇಕು.. ಟ್ರಾವೆಲ್ ಏಜೆನ್ಸಿ ಮಾಡಿದ್ರೆ ಒಳ್ಳೇದು.. ಅದ್ರಲ್ ಲ

ಎಳೆ ಮುಂಗುರುಳು, ಓರೆ ಬೈತಲೆ, ಕಡುಗಪ್ಪು ಕಾಡಿಗೆ, ಚುಕ್ಕಿ ಬೊಟ್ಟು, ಜೋತುಬಿದ್ದ ಕಿವಿಯೋಲೆ, ಖಾಲಿ ಮೂಗು!!

Image
ಭವ್ಯ ಕನಸೊಂದಕ್ಕೆ ಬುನಾದಿ ಹಾಕಿದ ಘಳಿಗೆ, ಅದೆಷ್ಟೋ ಜನ್ಮಗಳಿಂದ ಬರಡಾಗಿ ಹೋಗಿದ್ದ ಆತ್ಮದಲ್ಲಿ ಪ್ರೀತಿಯ ಒರೆತ. ತೀರಾ ಸನಿಹದಿಂದ ಗುರಾಯಿಸಿದವಳ ವಯಸ್ಸು ನನಗಿಂತ ಕಡಿಮೆ ಎಂದು ತಿಳಿದಾಗ ವರ್ಷದ ಅಷ್ಟೂ ಹಬ್ಬಗಳ ಸಾಮೂಹಿಕ ಆಚರಣೆ!! ಅವಳನ್ನು ಕಂಡ ಮೊದಲ ಕ್ಷಣವಿನ್ನೂ ಹಸಿರಾಗಿದೆ, ಎಳೆ ಮುಂಗುರುಳು, ಓರೆ ಬೈತಲೆ, ಕಡುಗಪ್ಪು ಕಾಡಿಗೆ, ಚುಕ್ಕಿ ಬೊಟ್ಟು, ಜೋತುಬಿದ್ದ ಕಿವಿಯೋಲೆ, ಖಾಲಿ ಮೂಗು!! ತೀರಾ ಮೊದಲ ನೋಟದಲ್ಲೇ ಕಣ್ಣಿಗೆ ಬಿದ್ದ ಸಂಗತಿಗಳೆಲ್ಲಾ ಮನದಲ್ಲಿ ಅಚ್ಚಾಗಿ, ಜೀವನದ ಅಷ್ಟೂ ರಾತ್ರಿಗಳಿಗೆ ಸಾಕಾಗುವಷ್ಟು ಕನಸು ಬಿಡುಗಡೆಯಾಗಲು.. ಮೊದಲ ಪ್ರೇಮ ಮೊಳಕೆಯೊಡೆದಿತ್ತು!! ಒಮ್ಮುಖದ ಪ್ರೀತಿ ಎಂತಹವರನ್ನೂ ಅಲುಗಾಡಿಸಿಬಿಡುತ್ತದೆ, ಹುಡುಗಿಯನ್ನು ಪರಿಚಯಿಸಿಕೊಳ್ಳುವುದರಿಂದ ಹಿಡಿದು ಪ್ರೇಮ ನಿವೇದನೆ ಮಾಡಿಕೊಳ್ಳುವ ತನಕ ಅಕ್ಷರಶಃ ತ್ರಿಶಂಕು ಸ್ಥಿತಿ!! ಈ ವಿಚಾರದಲ್ಲಿ ನಾನಂತೂ ಹೈರಾಣಾಗಿದ್ದೆ, ಆಕೆಯ ಪೂರ್ವಾಪರಗಳನ್ನೆಲ್ಲಾ ತಿಳಿಯಲು ರಹಸ್ಯ ಕಾರ್ಯಾಚರಣೆಯನ್ನೇ ನಡೆಸಿ, ಅವಳ ದೋಸ್ತಿಯ ಮೂಲಕ ಪರಿಚಯ ಮಾಡಿಕೊಂಡು, ಮೊಬೈಲ್ ನಂಬರ್ ಪಡೆಯುವಷ್ಟರಲ್ಲಿ ಒಂದು ಶತಮಾನವೇ ಉರುಳಿದಂಥಾ ಅನುಭವ! ಕುಂಟುನೆಪವಿಟ್ಟುಕೊಂಡು ಮೊದಲ ಬಾರಿಗೆ ಕರೆ ಮಾಡಿದಾಗ ಅವಳೇ ಕರೆ ಸ್ವೀಕರಿಸಿದ್ದು ನನ್ನ ಪೂರ್ವಜರ ಪುಣ್ಯ! ಆಗಿನ್ನೂ ಸ್ಮಾರ್ಟ್ಫೋನ್ ಕೈಗೆ ಸಿಕ್ಕಿರದ ಕಾರಣ ನೋಕಿಯಾ ಕೀಪ್ಯಾಡ್ ಮೊಬೈಲಿನ ಅಷ್ಟೂ ಬಟನ್ನುಗಳನ್ನು ಪಟಪಟನೆ ಒತ್ತಿ ಮೆಸೇಜು ವಿನಿಮಯ ಮಾಡ

ಒಂಚೂರು ಪಥ್ಯ ಕಲಿಸು, ಅವ್ಯಾಹತವಾಗಿ ಪ್ರೀತಿಸುವೆ

Image
ಜೀವದಾಳದಲ್ಲೆದ್ದ ಅಲೆಯೊಂದು ಒಂದೇ ಸಮನೆ ಭೋರ್ಗರೆಯುತ್ತಿದೆ. ತುರ್ತಾಗಿ ತೀರದಲ್ಲೊಮ್ಮೆ ಸುಳಿದಾಡು, ಹೆಜ್ಜೆಗಳಚ್ಚಿಗೆ ಮುತ್ತಿಕ್ಕಿ ತಣ್ಣಗಾಗಲಿ ಉನ್ಮಾದ. ಬಯಕೆಗಳ ಬತ್ತಳಿಕೆ ಹೊತ್ತು ಕೂತಿರುವ ನಿನ್ನ ಹುಡುಗನುಸಿರಲ್ಲಿ ಬೆರೆತಿರುವುದು ಬರೀ ಇಂತಹುದೇ ಗುಟ್ಟುಗಳು, ಅವುಗಳಲ್ಲೊಂದು ಪಾಲನ್ನು ಬಿಟ್ಟುಕೊಡುವೆ, ಹಿಡಿದಿಟ್ಟುಕೋ. ಜೀವನ ಪೂರಾ ಭ್ರಾಂತಿಯಲ್ಲಿದೆ, ಪ್ರೀತಿಯಲ್ಲಿ ಬರೀ ಸಿಹಿಯನ್ನೇ ಸವಿದು ಮಧುಮೇಹಿಯಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ, ಒಂಚೂರು ಪಥ್ಯ ಕಲಿಸು. ಬದುಕೆಂಬ ಭೂರಿಭೋಜನಕ್ಕೆ ಕೊಂಚ ಮಸಾಲೆ ಬೀಳಲಿ, ಒಗ್ಗರಣೆಯಲ್ಲೊಂದಷ್ಟು ಸಿಡುಕು, ಕೋಪ, ಗುದ್ದಾಟ, ಮುದ್ದಾಟ, ತಮಾಷೆಯಿರಲಿ, ಹದವಾಗಿ ಬೆರೆತ ಪ್ರೀತಿಯ ತುತ್ತು ಹೊಟ್ಟೆ ತುಂಬಿಸಲಿ, ಸಂಕಷ್ಟ ಚತುರ್ಥಿಯಂತೆ ಆಗಾಗ ಉಪವಾಸಕ್ಕೊಂದು ನೆಪ ಸಿಗಲಿ. ನಿನ್ನ ಕೆಂದುಟಿಯ ಮೇಲೆ ಬೆರಳಿಟ್ಟು, ಕಣ್ಣಲ್ಲಿ ಕಣ್ಣಿಟ್ಟು ಪಿಸುಗುಡುವ ನಡುವೆ ಅರಿವಿಲ್ಲದಂತೆ ಮುದ್ದಾಗಿ ತುಟಿಯೊತ್ತಿಬಿಡು, ಸುಖಾಸುಮ್ಮನೆ ಹಠಹಿಡಿದು ಗೋಳಾಡಿಸು, ನನ್ನ ಹುಸಿಮುನಿಸಿಗೊಂದು ನಯವಾದ ಕಾರಣವಿರಲಿ. ಬಯಸಿ ಬಂದಾಗೊಮ್ಮೆ ದೂರತಳ್ಳು, ವಿರಹದ ತಾಪ ಒಂಚೂರು ಸುಡಲಿ. ಚುಂಬಿಸುವ ನೆಪದಲ್ಲಿ ಗಲ್ಲ ಕಚ್ಚುವುದನ್ನು ಮಾತ್ರ ಮರೆಯದಿರು, ನಿನ್ನ ದಾಳಿಂಬೆಯಂಥಾ ಹಲ್ಲುಗಳ ಸಿಹಿ ನನ್ನ ಒರಟು ಕೆನ್ನೆಗೂ ಸೋಕಲಿ. ನನ್ನಷ್ಟೂ ಹಗಲುಗಳಿಗೆ ನೀನೇ ಇಬ್ಬನಿ ಆಗಬೇಕು, ಎಲ್ಲಾ ರಾತ್ರಿಗಳಿಗೂ ನಿನ್ನ ಮಾತೇ ಲಾಲಿಯಾಗಬೇಕು. ಮುದ

ಅತ್ಯುತ್ಕೃಷ್ಟ ಪ್ರೇಮಕಥೆಯೊಂದು ಸೃಷ್ಟಿಯಾಗಲಿ

Image
ರೂಪಸಿ…                 ಅಕಾಲಿಕ ಮಳೆಗೆ ನೆಂದ ಬೀದಿದೀಪದಲ್ಲಿ ಹರಳುಗಟ್ಟಿರುವ ಹನಿಗಳೊಳಗೆ ನಿನ್ನ ಛಾಯೆಯಿದೆ, ತೇವಗೊಂಡಿರುವ ಕುಸುಮದ ಎಸಳು ನಿನ್ನ ಅಧರದಂತೆ ಕೆಂಪುಗೊಂಡಿದೆ, ಇಳಿಸಂಜೆಯ ಬಾನಿನಲ್ಲಿ ನಿನ್ನದೇ ಕೆನ್ನೆಯ ರಂಗಿದೆ, ಪ್ರಕೃತಿಯೊಡನೆ ನಿನ್ನದೇನಾದರೂ ಒಪ್ಪಂದ ಏರ್ಪಟ್ಟಿರಬಹುದೆಂಬ ಗುಮಾನಿ ನನಗೆ. ನೂಪುರದ ಮಣಿಗಳು ನಿನ್ನ ಕಾಲಿಗೆ ಮುತ್ತಿಡುವಾಗಲೆಲ್ಲಾ ಅತೀವ ಹೊಟ್ಟೆಕಿಚ್ಚಾಗುತ್ತದೆ, ಮೂಗುತಿಗೆ ತಾಗುವ ಉಸಿರ ತಾಪ ನನಗೂ ಸೋಕಲಿ ಎಂದು ಹರಕೆ ಹೊತ್ತಿರುವೆ, ನಿಶಾಚರಿ ಕನಸುಗಳನ್ನೆಲ್ಲಾ ಸಂಪೂರ್ಣ ನಿನಗೇ ಮೀಸಲಿಟ್ಟಿರುವೆ ತಡಮಾಡದೇ ಆಕ್ರಮಿಸಿಕೋ. ಎದೆತಳದ ಅಕ್ಷಾಂಶ ರೇಖಾಂಶಗಳೆಲ್ಲಾ ನಿನ್ನ ಪಾದಸ್ಪರ್ಶದಿಂದ ಪಾವನಗೊಂಡು, ಮನದ ಭೂಪಟದಲ್ಲಿ ನಿನ್ನದೊಂದು ಸಾಮ್ರಾಜ್ಯ ಸ್ಥಾಪನೆಯಾಗಲಿ. ಬೈಗಿನಲ್ಲಿ ದರ್ಬಾರು ನಡೆಸು ಬದುಕು ಸಾರ್ಥಕವಾಗಲಿ. ಪೋರಿಯೊಬ್ಬಳು ಈ ಪರಿ ಕಾಡುವ ಕಥೆ ಯಾವ ರಾಜನ ಇತಿಹಾಸದ ಪುಟದಲ್ಲೂ ನಮೂದಾಗಿರಲಿಕ್ಕಿಲ್ಲ ಅಥವಾ ಮೊದಲ ಪ್ರೇಮವನ್ನೇ ಗಟ್ಟಿಯಾಗಿ ಹಿಡಿದಿಟ್ಟುಕೊಂಡು ಕಾಯುವ ಹುಡುಗನೂ ಸಿಗಲಿಕ್ಕಿಲ್ಲ. ಇನ್ನೂ ಎಷ್ಟು ವರ್ಷಗಳ ತನಕ ಮೀರಾ ಮಾಧವರ ಕಥೆಯನ್ನೇ ಎಳೆದಾಡುವುದು? ಸತಾಯಿಸದೆ ಸಮ್ಮತಿಸು ಅತ್ಯುತ್ಕೃಷ್ಟ ಪ್ರೇಮಕಥೆಯೊಂದು ಸೃಷ್ಟಿಯಾಗಲಿ. ಇಂತಿ,          ಕನಸು ಕಂಗಳ ಹುಡುಗ          ಸ್ಕಂದ ಆಗುಂಬೆ. (ಮೂಲಪ್ರತಿ) ಈ ಲೇಖನ ಪ್ರಜಾವಾಣಿ ದಿನಪತ್ರಿಕೆಯ ಮೆಟ್ರೋ (ಮೈಸೂರು ಆವೃತ್ತಿ) ಪ

ಪುನರ್ವಸು

Image
            ಆಷಾಢ ಮಾಸದ ಪುನರ್ವಸು ಮಳೆಯಿದ್ದಿರಬೇಕು, ನನ್ನ ಜೀವನದಲ್ಲಿ ಅಂತಹಾ ಮಳೆಯನ್ನು ಎಂದೂ ನೋಡಿರಲಿಲ್ಲ. ಅದ್ಯಾರ ಮೇಲಿನ ಮುನಿಸಿಗೆ ಮೋಡ ತನ್ನ ಗರ್ಭವನ್ನು ಹಿಸುಕಿಕೊಂಡಿತ್ತೋ ಗೊತ್ತಿಲ್ಲ. "ತುಂಬಾ ಮಳೆ ಅಲ್ವಾ?" ಹಳೆಯ ಮೂಕಾಂಬಿಕಾ ಬಸ್ಸಿನ ಕಿಟಕಿ ಸಂದಿಯಿಂದ ಒಳಹೊಕ್ಕು ಸೀಟನ್ನಾಕ್ರಮಿಸಿಕೊಳ್ಳಲು ಯತ್ನಿಸುತ್ತಿದ್ದ ಮಳೆ ನೀರಿನಾಸೆಗೆ ಕಲ್ಲು ಹಾಕಲು ಹೆಣಗಾಡುತ್ತಿದ್ದ ನನ್ನೆಡೆಗೆ ನಾಟಕೀಯವಾಗಿಯೇ ಪ್ರಶ್ನೆಯೊಂದನ್ನು ತೂರಿದಳು. "ವಿಷ್ಯಕ್ಕೆ ಬಾ" ತುಂಬಾ ಸ್ಪಷ್ಟವಾಗಿ ಹೇಳಿದೆ. ತನ್ನ ಹಳೇ ಸ್ಟೈಲಿನಲ್ಲೇ ಮುಂಗುರುಳು ಸರಿಸುತ್ತಾ, ಇರಿಸುಮುರಿಸಾದವಳಂತೆ ಒಂದಿಂಚು ದೂರ ಸರಿದು ಕೂರುವಷ್ಟರಲ್ಲಿ ಏಜೆಂಟರ್ ದೇವಣ್ಣ ನನ್ನೆಡೆಗೆ ಪರಿಚಿತದ ನಗು ಬೀರಿ, ಎರಡೂ ಟಿಕೆಟ್ ನೀನೇ ಮಾಡಿಸ್ತೀಯಾ? ಅಂತ ಕಣ್ಸನ್ನೆಯಲ್ಲೇ ಕೇಳಲು, ಹುಡುಗಿಯರು ಜೊತೆಗಿದ್ದಾಗ ಅವರ ಖರ್ಚನ್ನು  ನಾವೇ ಭರಿಸಬೇಕೆಂಬ ಅಲಿಖಿತ ನಿಯಮವನ್ನು  ಪಾಲಿಸುವ ಸಲುವಾಗಿ ಮಳೆಯಲ್ಲಿ ನೆಂದು ಒಂದಕ್ಕೊಂದು ಬೆಸೆದುಕೊಂಡಿದ್ದ ಐವತ್ತು ರೂಪಾಯಿಯ ಎರಡು ನೋಟುಗಳನ್ನು ಅಂಗಿಯ ಜೇಬಿನಿಂದ ಜೋಪಾನವಾಗಿ ಹೊರಗೆಳೆದು ದೇವಣ್ಣನ ಕೈಗಿತ್ತು "ಒಂದ್ ತೀರ್ಥಹಳ್ಳಿ, ಒಂದ್ ಮಂಡಗದ್ದೆ" ಎಂದು ಅದಾಗ ತಾನೇ ಬಂದಿದ್ದ ಡಿಜಿಟಲ್ ಟಿಕೆಟ್ ಮಶೀನಿನಿಂದ ಕಿರ್ರ್ ಕಿರ್ರ್ ಎಂದು ಸದ್ದು ಮಾಡುತ್ತಾ ಹೊರ ಬರುತ್ತಿದ್ದ ಟಿಕೆಟ್ ಚೀಟಿಯನ್ನು ಗಮನಿಸುತ್ತಾ ಕುಳಿತೆ.

ಗಾಂಧಿ ಕ್ಲಾಸ್..!

Image
ಗಾಂಧಿ.. ಇದೊಂದು ಹೆಸರು ದುರುಪಯೋಗಕ್ಕೊಳಗಾದಷ್ಟು ಮತ್ಯಾವ ಹೆಸರುಗಳೂ ಆಗಿರಲಿಕ್ಕಿಲ್ಲ.. ರಾಜಕೀಯ ನಾಯಕರಿಂದ ಹಿಡಿದು, ಶಾಲಾ ಮಕ್ಕಳ ತನಕ ಎಲ್ಲರ ಬಾಯಲ್ಲೂ ಗಾಂಧಿ ಇದ್ದೇ ಇರ್ತಾರೆ. ಇದೊಂಥರಾ "ನಾಮವೊಂದು ರೂಪ ಹಲವು". ಆಗ ನಾನಿನ್ನೂ ನಾಲ್ಕನೇ ತರಗತಿ ವಿದ್ಯಾರ್ಥಿ ಇರಬಹುದು.. ಒಂದೆಡೆ ಮೇಷ್ಟ್ರು ಕೊಡುವ ಬೆತ್ತದೇಟು, ಮತ್ತೊಂದೆಡೆ ಮನೆಯಲ್ಲಿ ಅಮ್ಮ ಕರುಣಿಸುತ್ತಿದ್ದ ಕೆಂಪನೆಯ ಬರೆ, ಫಟ್ ಎಂದು ಒಂದೇಟು ಕೊಟ್ಟರೆ ಐದು ಕೈಬೆರಳುಗಳ ಅಚ್ಚೂ ತೊಡೆಯ ಮೇಲೆ ಹಾಜರ್!! ಇಂತಹ ಪರಿಸ್ಥಿತಿಯಲ್ಲಿ ವಿಧೇಯ ವಿದ್ಯಾರ್ಥಿ ಆಗದಿದ್ದರೆ ಉಳಿಗಾಲವಿಲ್ಲ ಎಂದು ಅರಿವಾಗಿ ಶಿಸ್ತಿನ ಸಿಪಾಯಿಯಾಗಿದ್ದೆ. ನಾಲ್ಕು ದಿನಗಳ ಕಾಲ ರಜೆಯಿದ್ದರೆ, ರಜೆಯ ಮೊದಲ ದಿನವೇ ಹೋಂ ವರ್ಕ್ ಎಲ್ಲಾ ಮುಗಿಸಿಡುವುದೇನು? ತರಗತಿಯಲ್ಲಿ ಕೇಳಿದ ಪ್ರಶ್ನೆಗೆಲ್ಲಾ ಥಟ್ಟನೆ ಎದ್ದು ಉತ್ತರಿಸುವುದೇನು? ಸಹಪಾಠಿಗಳೆಲ್ಲಾ ಒಂಬತ್ತರ ಮಗ್ಗಿಗೇ ತಡವರಿಸುತ್ತಿದ್ದರೆ ನಾನು ಮಾತ್ರ ಇಪ್ಪತ್ನಾಲ್ಕೊಂದ್ಲಿ ಇಪ್ಪತ್ನಾಲ್ಕ ಎಂದು ರಾಜಗಾಂಭೀರ್ಯದಿಂದ ಮೇಷ್ಟ್ರ ಮುಂದೆ ನಿಲ್ಲುವುದೇನು? ಆಹಾ!! ಮೆರೆದಿದ್ದೇ ಮೆರೆದಿದ್ದು. ನಾನು ಪಟಪಟನೆ ಉತ್ತರಿಸುತ್ತಿದ್ದರೆ ಮೇಷ್ಟ್ರಿಗೆ ಖುಷಿಯೋ ಖುಷಿ, ಅದೇ ಖುಷಿಯಲ್ಲಿ ಪಕ್ಕದಲ್ಲಿ ಉತ್ತರಿಸಲು ತಡವರಿಸಿ ಗೊಣ್ಣೆ ಸುರಿಸುತ್ತಿದ್ದ ಗೋಪಾಲನ ಮೂಗು ಹಿಡಿದು ಕೆನ್ನೆಗೆ ಬಾರಿಸು ಎಂದು ಆರ್ಡರ್ ಮಾಡುವ ತನಕ ನಾನೆಂಥಾ ತಪ್ಪು ಮಾಡಿದೆ ಎಂಬ ಅರಿವಾಗಿರಲಿಲ್

ಕೃಷ್ಣ ಬಿಕರಿಯಾದ..

Image
ನನ್ನಿಷ್ಟದ ಕೃಷ್ಣ ಬಿಕರಿಯಾದ ಭಕ್ತಿ ವ್ಯಾಪಾರಕ್ಕೆ ರಂಗು ರಂಗಿನ ದೀಪವಿಲ್ಲಿ ಎಳೆ ಬತ್ತಿ ಹಣತೆಯಿಲ್ಲ ಢೋಲು, ಢಕ್ಕೆ, ತಮಟೆಯಲ್ಲಿ ಕೊಳಲು ಊದಿದರೆ ಕೇಳುವವರಿಲ್ಲ ಕೋಲ್ಮಿಂಚಿನಾಭರಣವಿದೆ ಬಾಯಿ ತುದಿಗೆ ಕದ್ದ ಬೆಣ್ಣೆಯಿಲ್ಲ ಗೋವು ಕಾಯುತ್ತಿದ್ದವನಿಗೆ ಇದೆಂಥಾ ದುಸ್ಥಿತಿ? ನನ್ನ ಕೃಷ್ಣ ಪುಟ್ಟ ಮೂರ್ತಿ ಅಹಂಕಾರದಿ ತಲೆಯೆತ್ತಿದವನಲ್ಲ ಕೈ ಚಾಚುತ್ತಿದ್ದುದು ಬೆಣ್ಣೆ ಮುದ್ದೆಗೆ ಮೂರು ಕಾಸಿನಾಸೆಗಲ್ಲ ದನದ ಹಿಂಡಲ್ಲಿ ಓಡಿದವನಿಗೆ ಧನದಾಹ ಹುಟ್ಟಿಸಿದವರಾರೋ? ರಾಧೆ, ರುಕ್ಮಿಣಿಯರ ಗೆದ್ದವನ ಹೆಸರಲ್ಲಿ ಪ್ರೇಮ ಮಂದಿರವಂತೆ, ಮೋಹ ಮಂದಿರವಂತೆ ಹೆಸರಷ್ಟೇ, ಇಲ್ಲಿ ಪ್ರೇಮವಿಲ್ಲ, ರಾಧೆಯಿಲ್ಲ, ರುಕ್ಮಿಣಿಯಿಲ್ಲ ಹುಡುಕಿದರೆ ಕೃಷ್ಣನೂ ಇಲ್ಲ… ಬೆಣ್ಣೆ ಕದ್ದ ತಪ್ಪಿಗೆ ಘೋರ ಅಪಮಾನ ಛೇ!! ಸಾಧುವಲ್ಲ.‌. ತುಂಟ ಮಾಧವನಿಗೆ ಗಾಂಭೀರ್ಯ ಸಲ್ಲ ಭಕ್ತಿ ವ್ಯಾಪಾರದ ಹಸಿವಿಗೆ ಕೃಷ್ಣ ಬಿಕರಿಯಾದ, ಅವನೊಟ್ಟಿಗೆ ರಾಧೆಯೂ - ಅನಾಸ್ಕ

ನನಗೆ ಅನ್ನಿಸಿದ್ದು...

Image
ಮೊನ್ನೆ ಮೊನ್ನೆ ತನಕ ಹೀರೋ ಆಗಿದ್ದ ಖಡಕ್ ಅಧಿಕಾರಿಯೊಬ್ಬರು ಸಡನ್ನಾಗಿ ವಿಲನ್ ಆಗ್ತಾರೆ... ರಾಜಕೀಯಕ್ಕೆ ಬಂದು ಹಾಳಾಗ್ಬಿಟ್ರು ಅಂತ ಬೈಸ್ಕೊಳ್ತಿದ್ದ ರಾಜಕಾರಣಿಯೊಬ್ಬರು ಇದ್ದಕ್ಕಿದ್ದಂತೆ ಮಾದರಿ ವ್ಯಕ್ತಿಯಾಗ್ತಾರೆ... ಆದರೆ, ಈ ಅಭಿಪ್ರಾಯಗಳೆಲ್ಲಾ ಎಷ್ಟು ದಿನದವರೆಗೆ ಇರ್ತಾವೆ? ಅವರ ಇನ್ನೊಂದು ನಿರ್ಧಾರ ನಮ್ಮ ವೈಯುಕ್ತಿಕ ನಿಲುವಿನೊಂದಿಗೆ ತಾಳೆಯಾಗುತ್ತಿಲ್ಲ ಅನ್ನಿಸೋವರೆಗೆ.. ಅಷ್ಟೇ, ಮತ್ತೆ ಉಲ್ಟಾಪಲ್ಟಾ. ಅವರು ಆ ಕ್ಷಣಕ್ಕೆ ತೋಚಿದಂತೆ ರಿಯಾಕ್ಟ್ ಮಾಡಿದ್ರೂ ಸಹ ನಾವು ಮಾತ್ರ ಅದನ್ನ ಸ್ಕ್ರಿಪ್ಟೆಡ್ ಅನ್ನೋ ಥರ ನೋಡ್ತೀವಿ, ಘಟನೆ ಕುರಿತು ಅವರು ಅಭಿಪ್ರಾಯ ವ್ಯಕ್ತಪಡಿಸುವ ಮೊದಲೇ ನಾವು ನಮಗೆ ಬೇಕಾದಂತೆ ತೀರ್ಪು ಕೊಡ್ತೀವಿ. ಒಬ್ಬ ಸಂಸದ - ನನಗೆ ರಾಜಕೀಯ ಭವಿಷ್ಯಕ್ಕಿಂತ ಧರ್ಮ ಮುಖ್ಯ ಅಂದಾಗ ನಾವು ಸಂಭ್ರಮಿಸೋದು ಎಷ್ಟರ ಮಟ್ಟಿಗೆ ಸಮಂಜಸ? ಅವರು ಆ ಕ್ಷಣಕ್ಕೆ ಭಾವೋದ್ವೇಗದಿಂದ ಆಡಿದ ಮಾತು ಮುಂದೆ ಬದಲಾಗಲೂಬಹುದು. ಅಂತೆಯೇ ಒಬ್ಬ ಪೊಲೀಸ್ ಅಧಿಕಾರಿ ಅದೂ ಸಹ ಯುವಕರ ಕಂಗಳಿಗೆ ಹೊಳಪನ್ನು ತುಂಬುವ ಶಕ್ತಿಯುಳ್ಳ ದಕ್ಷ ಅಧಿಕಾರಿ ಮೇಲಿನವರ ಆದೇಶವನ್ನು ಪಾಲಿಸಿದರೆ ನಮ್ಮ ಕಣ್ಣಿಗೆ ಧರ್ಮದ್ರೋಹಿಯಾಗೋದು ವಿಪರ್ಯಾಸ.. ಕಷ್ಟಪಟ್ಟು ಆ ಸ್ಥಾನಕ್ಕೆ ಏರಿದಾತನಿಗೆ ನಾವು ಕೊಡುವ ಮರ್ಯಾದೆಯಾ ಅದು? ಹೋಗಲಿ... ಒಬ್ಬ ಅಧಿಕಾರಿ ಒಂದು ಧರ್ಮದ ಪರವಾಗಿ ಇರಬೇಕು ಅಂತ ಅಂದುಕೊಳ್ಳೋದು ಸರಿಯಾ? ಈ ಸರ್ಕಾರಗಳು ತಮಗೆ ಬೇಕಾದಂತೆ ಆದೇಶ ಹೊರಡಿಸಿ ಜನ