ಲಗಾಮಿಲ್ಲದ ಈ ಕುದುರೆ ಸವಾರಿಯಲ್ಲಿ ಬಿಜೆಪಿ ಉರುಳಲೂಬಹುದು, ಉಳಿಯಲೂಬಹುದು!
ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಪಕ್ಷ ಅಧಿಕಾರದ ಚುಕ್ಕಾಣಿಯನ್ನು ಮತ್ತೆ ಹಿಡಿಯಬಹುದೆಂಬ ನಿರೀಕ್ಷೆ ಇತ್ತಾದರೂ ಕಳೆದ ಬಾರಿಗಿಂತಲೂ ದೊಡ್ಡ ಮಟ್ಟದ ಗೆಲುವು ಸಿಕ್ಕಿರುವುದು ಬಿಜೆಪಿಗರಿಗೂ ಅಚ್ಚರಿ ತಂದಿರಬಹುದು. ಕರ್ನಾಟಕದಲ್ಲಂತೂ ಪಕ್ಷದ ಮುಖಂಡರೇ ನಿಬ್ಬೆರಗಾಗುವ ಫಲಿತಾಂಶ ಸಿಕ್ಕಿದೆ. ಆದರೆ, ಬಿಜೆಪಿಯ ಪ್ರಚಂಡ ಗೆಲುವು ಹಾಗೂ ಮೈತ್ರಿ ಪಕ್ಷಗಳ ಹೀನಾಯ ಸೋಲನ್ನು ಅವಲೋಕಿಸುವುದಾರೆ, ಉಭಯ ಪಕ್ಷಗಳೂ ನೆನಪಿಡಬೇಕಾದ ಹಲವು ಸಂಗತಿಗಳು ಕಂಡುಬರುತ್ತವೆ. ಬಿಜೆಪಿಯ ಅಭೂತಪೂರ್ವ ಗೆಲುವು ಮೋದಿಯ ಅಭಿಮಾನಿಗಳಿಗೆ ಎಷ್ಟು ಖುಷಿ ಕೊಟ್ಟಿದೆಯೋ, ಅವರ ಟೀಕಾಕಾರರನ್ನು ಅದಕ್ಕಿಂತಲೂ ದೊಡ್ಡ ಮಟ್ಟದ ಸಂಕಟಕ್ಕೆ ಈಡುಮಾಡಿದೆ. ಇದಕ್ಕೆ ಮುಖ್ಯ ಕಾರಣ, ಮೋದಿಯ ಗೆಲುವನ್ನು ಟೀಕಿಸಲು ಮುಂದಾದಾಗ ಎದುರಾಗುವ ಪರ್ಯಾಯದ ಪ್ರಶ್ನೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಮೆರೆದಿತ್ತೋ ಅದೇ ಸ್ಥಿತಿಗೆ ಬಿಜೆಪಿ ಬಂದು ನಿಂತಿದೆ. ಜೊತೆಗೆ, ಅಧಿಕಾರವನ್ನು ಅತ್ಯಂತ ನಾಜೂಕಾಗಿ ಉಳಿಸಿಕೊಳ್ಳಲು ಏನು ಮಾಡಬೇಕು ಎಂಬುದು ಅವರಿಗೆ ಚೆನ್ನಾಗಿ ತಿಳಿದಂತಿದೆ. ಜನರು ಏನನ್ನು ತಿರಸ್ಕರಿಸುತ್ತಾರೆ ಹಾಗೂ ಏನೇನು ಮಾಡದಿದ್ದರೆ ಉಳಿಯಬಹುದು ಎಂಬುದಕ್ಕೆ ಕಾಂಗ್ರೆಸ್ ಪಕ್ಷ ಎದುರಿಸಿದ ಕಷ್ಟಗಳು ಉದಾಹರಣೆಯಂತೆ ಕಣ್ಣ ಮುಂದಿವೆ. ಆದರೆ, ಈಗ ಬಿಜೆಪಿಯ ಮುಂದಿರುವ ಸವಾಲುಗಳೇ ಬೇರೆ. ಅದರಲ್ಲಿ ಪ್ರಮುಖವೆನಿಸುವ ಅಂಶಗಳು; ಪ್ರಬಲ ವಿರೋಧ ಪಕ್ಷವೇ ಇಲ್ಲದ ಸಂ